ಮುಂಬೈ,ಮೇ. 16(DaijiworldNews/AK): ಬಾಲಿವುಡ್ನಲ್ಲಿ ಸಿದ್ಧವಾಗುತ್ತಿರುವ ‘ರಾಮಾಯಣ’ ಸಿನಿಮಾ ದಲ್ಲಿ ‘ರಾಕಿಂಗ್ ಸ್ಟಾರ್’ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾಮಾಯಣದಲ್ಲಿ ಹಲವು ಪ್ರಮುಖ ಪಾತ್ರಗಳು ಇವೆ. ಬಹಳ ನಿರೀಕ್ಷೆಗಳು ಇವೆ. ಅವುಗಳಿಗೆ ಕಲಾವಿದರ ಆಯ್ಕೆ ನಡೆಯುತ್ತಿದೆ. ರಾವಣನ ಪತ್ನಿ ಮಂಡೋದರಿ ಪಾತ್ರದಲ್ಲಿ ನಟಿಸಲು ಕಾಜಲ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನಾಗಿ ನಟಿಸುತ್ತಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅವರು ಅಭಿನಯಿಸುತ್ತಿದ್ದಾರೆ. ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಯಶ್ ಕೂಡ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ. ಅವರ ಜೊತೆ ಕಾಜಲ್ ಅಗರ್ವಾಲ್ ಕೂಡ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
ಪಾತ್ರವರ್ಗದ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಚಿತ್ರತಂಡದ ಆಪ್ತ ಮೂಲಗಳು ಹೇಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಮಾಯಣದಲ್ಲಿ ಮಂಡೋದರಿ ಪಾತ್ರ ಕೂಡ ಪ್ರಮುಖವಾಗಿ ಬರಲಿದೆ. ಅಂತಿಮವಾಗಿ ಕಾಜಲ್ ಅಗರ್ವಾಲ್ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.