ಮುಂಬೈ, ಸೆ. 30 (DaijiworldNews/AA): ಹೈದ್ರಾಬಾದ್ನಲ್ಲಿ ನಡೆದ ಕಾಂತಾರ ಪ್ರೀ-ರಿಲೀಸ್ ಇವೆಂಟ್ನಲ್ಲಿ ವೇದಿಕೆ ಮೇಲೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ರು. ಈ ಹಿನ್ನೆಲೆ ಆಂಧ್ರ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಮುಂಬೈನಲ್ಲಿ ಹಿಂದಿ ಭಾಷೆ ಮಾತನಾಡುವ ರಿಷಬ್ ಹೈದ್ರಾಬಾದ್ನಲ್ಲಿ ತೆಲುಗು ಮಾತನಾಡಿಲ್ಲವೆಂದು ಕೆಲವರು ರಿಷಬ್ರನ್ನ ಟ್ರೋಲ್ ಮಾಡಲಾರಂಭಿಸಿದ್ರು. ಇದೀಗ ಈ ವಿಚಾರವಾಗಿ ಮುಂಬೈನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಅವರು, "ನನ್ನ ಭಾಷೆ ಕನ್ನಡ, ನಾನು ಹೆಮ್ಮೆಯ ಕನ್ನಡಿಗ, ನಾನು ಕನ್ನಡದಲ್ಲೇ ಯೋಚಿಸುವುದು ಹೀಗಾಗಿ ಕನ್ನಡ ಮಾತಾಡ್ತೀನಿ, ಮಾತನಾಡಲು ಬರದೇ ಇರೋ ಭಾಷೆಯನ್ನ ಮಾತನಾಡಿ ಆ ಭಾಷೆಗೆ ಅಗೌರವ ತೋರಿಸುವುದು ಬೇಡವೆಂದು ಕನ್ನಡದಲ್ಲಿ ಮಾತನಾಡಿದ್ದೇನೆ" ಎಂದು ತಿಳಿಸಿದ್ದಾರೆ.
"ಜೊತೆಗೆ ಎಲ್ಲ ಭಾಷೆಯನ್ನೂ ಕಲಿಯೋದಕ್ಕೆ ಖುಷಿ ಇದೆ. ಇತ್ತೀಚಿಗೆ ಬೇರೆ ಬೇರೆ ಭಾಷೆಯಲ್ಲಿ ಸಂದರ್ಶನ ಕೊಡುತ್ತಾ ಬಂದಿರೋದ್ರಿಂದ ಎಲ್ಲಾ ಭಾಷೆಯನ್ನ ಈಗೀಗ ಕಲಿಯುತ್ತಿದ್ದೇನೆ" ಎಂದು ಹೇಳಿದ್ದಾರೆ.
ಭಾನುವಾರ ಹೈದ್ರಾಬಾದ್ನಲ್ಲಿ ನಡೆದ ಕಾಂತಾರ ಪ್ರೀ-ರಿಲೀಸ್ ಇವೆಂಟ್ನಲ್ಲಿ ವೇದಿಕೆ ಮೇಲೆ ರಿಷಬ್ ಶೆಟ್ಟಿ ಕನ್ನಡದಲ್ಲೇ ಮಾತನಾಡಿದ್ರು. ಬಳಿಕ ಜನರಿಗೆ ರಿಷಬ್ 'ನನ್ನ ಮಾತು ಅರ್ಥವಾಗದಿದ್ದರೆ ತಾರಕ್ ಟ್ರಾನ್ಸ್ಲೇಟ್ ಮಾಡ್ತಾರೆ' ಎಂದಿದ್ದರು. ಈ ಹಿನ್ನೆಲೆ ಬೇರೆಲ್ಲಾ ಸ್ಥಳದಲ್ಲಿ ಆಯಾ ಭಾಷೆಯಲ್ಲಿ ಮಾತನಾಡುವ ರಿಷಬ್ ತೆಲುಗು ನಾಡಿದಲ್ಲಿ ತೆಲುಗು ಭಾಷೆ ಮಾತನಾಡಲಿಲ್ಲ ಎಂದು ವಿರೋಧ ವ್ಯಕ್ತವಾಗಿತ್ತು.