ಬೆಂಗಳೂರು, ಅ. 01 (DaijiworldNews/AA): ಪ್ರತಿ ವರ್ಷವೂ ನಟ ದರ್ಶನ್ ಕುಟುಂಬದಲ್ಲಿ ದಸರಾ ಹಬ್ಬವನ್ನ ವಿಶೇಷವಾಗಿ ಆಚರಿಸಲಾಗುತ್ತದೆ. ಸದ್ಯ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಆಯುಧಪೂಜಾ ಹಬ್ಬ ಆಚರಿಸಿದ್ದಾರೆ.

ಪ್ರತಿ ವರ್ಷ ದರ್ಶನ್ ಆರ್ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನ ನಿಲ್ಲಿಸಿ ಆಯುಧ ಪೂಜೆ ಮಾಡುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ದರ್ಶನ್ ದಸರಾ ಹಬ್ಬವನ್ನ ಜೈಲಿನಲ್ಲಿ ಆಚರಿಸುವಂತಾಗಿದೆ.
ಈ ವರ್ಷ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ಮಗ ದಸರಾ ಹಬ್ಬ ಆಚರಿಸಿದ್ದಾರೆ. ಈ ಫೋಟೋವನ್ನ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಪೂಜೆ ಮಾಡಿರುವ ಕಾರ್ ಮುಂದೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ನಿಂತಿರುವ ಫೋಟೋ ಜೊತೆ ಕಾರ್ಗಳ ಕೀಗಳನ್ನೆಲ್ಲಾ ಸಮಗ್ರವಾಗಿ ಒಂದು ಬೌಲ್ನಲ್ಲಿಟ್ಟಿರುವ ಫೋಟೋವನ್ನೂ ಅವರು ಪೋಸ್ಟ್ ಮಾಡಿದ್ದಾರೆ.