ಹೈದರಾಬಾದ್, ಜೂ. 19 (DaijiworldNews/AA): ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನ ನಾಂಪಲ್ಲಿ ನ್ಯಾಯಾಲಯವು ನಟ ಅಲ್ಲು ಅರ್ಜುನ್ಗೆ ಸಮನ್ಸ್ ಜಾರಿ ಮಾಡಿದ್ದು, ಜೂನ್ 22ರ ಸೋಮವಾರ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚನೆ ನೀಡಿದೆ.

ದೀರ್ಘಾವಧಿಯ ತನಿಖೆಯ ನಂತರ ಪ್ರಕರಣ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಒಟ್ಟು 23 ಜನರನ್ನು ಹೊಣೆಗಾರರನ್ನಾಗಿ ಮಾಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದರಲ್ಲಿ ಸಂಧ್ಯಾ ಥಿಯೇಟರ್ನ ಮಾಲೀಕರು ಮತ್ತು ವ್ಯವಸ್ಥಾಪಕರನ್ನು ಪ್ರಮುಖ ಆರೋಪಿಗಳನ್ನಾಗಿ ಮಾಡಲಾಗಿದೆ. ಈ ದೋಷಾರೋಪ ಪಟ್ಟಿಯನ್ನು ಪರಿಶೀಲಿಸಿದ ಕೋರ್ಟ್ ಅಲ್ಲು ಅರ್ಜುನ್ ಹಾಗೂ ಇತರ 19 ಆರೋಪಿಗಳಿಗೆ ಸಮನ್ಸ್ ನೀಡಿದ್ದು, ಅವರೆಲ್ಲರೂ ಸೋಮವಾರ ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ.
ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ದಿನದಂದು ಅಭಿಮಾನಿಗಳು ಮತ್ತು ಪ್ರೇಕ್ಷಕರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ ಅಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಪ್ರಾಣ ಕಳೆದುಕೊಂಡಿದ್ದರು ಹಾಗೂ ಹಲವರು ಗಾಯಗೊಂಡಿದ್ದರು.