ಜೆರುಸಲೆಮ್, ಫೆ. 25 (DaijiworldNews/AA): ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ಸದಾ ನಿಲ್ಲುತ್ತದೆ. ಇಸ್ರೇಲ್ನೊಂದಿಗೆ ಭಾರತದ ಸಂಬಂಧ ರಕ್ತ ಮತ್ತು ತ್ಯಾಗದಲ್ಲಿ ಬರೆಯಲ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಐತಿಹಾಸಿಕ ಇಸ್ರೇಲ್ ಪ್ರವಾಸದ ವೇಳೆ ಅಲ್ಲಿನ ಸಂಸತ್ತಿನ ನೆಸ್ಸೆಟ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, "ಅಕ್ಟೋಬರ್ 7 ರಂದು ನಡೆದ ಹಮಾಸ್ ದಾಳಿಯನ್ನು ಉಗ್ರರ ರಾಕ್ಷಸ ಕೃತ್ಯ ಅಂತ ಕರೆದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನಾವೆಲ್ಲಾ ಒಂದೇ ಎಂಬ ಖಡಕ್ ಮೆಸೇಜ್ ಪಾಸ್ ಮಾಡಿದ್ದಾರೆ. ನಿಮ್ಮ ನೋವನ್ನು ನಾವು ಅನುಭವಿಸುತ್ತೇವೆ. ನಿಮ್ಮ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ. ಈ ಕ್ಷಣ ಮತ್ತು ಇನ್ನ ಮುಂದೆಯೂ ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ" ಎಂದು ಹೇಳಿದರು.
"ಇಸ್ರೇಲ್ನೊಂದಿಗೆ ಭಾರತದ ಸಂಬಂಧ ರಕ್ತ ಮತ್ತು ತ್ಯಾಗದಲ್ಲಿ ಬರೆಯಲ್ಪಟ್ಟಿದೆ. ಭಾರತ ದೇಶ ಅಧಿಕೃತವಾಗಿ ಇಸ್ರೇಲ್ ಅನ್ನು ಒಂದು ರಾಷ್ಟ್ರ ಅಂತ ಗುರುತಿಸಿದ ಅದೇ ದಿನ ನಾನು ಹುಟ್ಟಿದ್ದೆ. ಮೊದಲ ಮಹಾಯುದ್ಧದ ಸಮಯದಲ್ಲಿ, 4,000ಕ್ಕೂ ಹೆಚ್ಚು ಭಾರತೀಯ ಸೈನಿಕರು ಈ ಪ್ರದೇಶದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದರು. ಸೆಪ್ಟೆಂಬರ್ 1918ರಲ್ಲಿ ಹೈಫಾದಲ್ಲಿ ನಡೆದ ಅಶ್ವಸೈನ್ಯದ ದಾಳಿಯು ಮಿಲಿಟರಿ ಇತಿಹಾಸದಲ್ಲಿ ಒಂದು ಮಹತ್ವದ ಅಧ್ಯಾಯವಾಗಿ ಉಳಿದಿದೆ" ಎಂದರು.