ಕಾಸರಗೋಡು, ಆ.17(DaijiworldNews/AA): ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಮೂವರು ಗಾಯಗೊಂಡ ದಾರುಣ ಘಟನೆ ಶನಿವಾರ ಮಧ್ಯಾಹ್ನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ನಡೆದಿದೆ.


ಸುರತ್ಕಲ್ ಎನ್ಐಟಿಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರೀ ಬುದ್ದಿನ್ (21) ಮೃತಪಟ್ಟವರು. ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಲ್ಟೋ ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಧರೆಗೆ ಬಡಿದಿದೆ. ಈ ವೇಳೆ ಕಾರಿನಲ್ಲಿ ಸಿಲುಕಿದ್ದ ಅರೀಬುದ್ದೀನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಾಗರಿಕರು ಹಾಗೂ ರಾಜಾಪುರ ಠಾಣಾ ಪೊಲೀಸರು ಅಪಘಾತಕ್ಕೀಡಾದ ಕಾರಿನಲ್ಲಿ ಸಿಲುಕಿದ್ದ ಅರಿಬುದ್ದೀನ್ ನನ್ನು ಹೊರತೆಗೆದರು. ಮೃತ ದೇಹವನ್ನು ಕಾಸರಗೋಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಮನೆಯವರಿಗೆ ಮಾಹಿತಿ ನೀಡಲಾಗಿದ್ದು ರಾತ್ರಿ ವೇಳೆ ಕಾಞ೦ಗಾಡ್ ಗೆ ತಲುಪುವ ಸಾಧ್ಯತೆ ಇದೆ.