ಮಂಗಳೂರು, ಫೆ.28 (DaijiworldNews/AA): ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಭೇಟಿ ನೀಡಿ ಆರೋಗ್ಯಕ್ಷೇಮ ವಿಚಾರಿಸಿ ಫೌಂಡೇಶನ್ ನ ವತಿಯಿಂದ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರಿಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಉಪಸ್ಥಿತರಿದ್ದರು.