ಬೆಳ್ತಂಗಡಿ, ಮಾ.22 (DaijiworldNews/AA): ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದಾರೆ. ಇಂದು ಬೆಳಗ್ಗೆ ಆ ಮಗುವನ್ನು ರಕ್ಷಿಸಿ ಆರೈಕೆ ಮಾಡಿದ ಸಾರ್ವಜನಿಕರು, ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.





ಈ ಘಟನೆ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.