ಉಡುಪಿ,ಮಾ.23(DaijiworldNews/TA): ಮಲ್ಪೆಯಲ್ಲಿ ಮಹಿಳೆಯ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸಮರ್ಥಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆಯಲ್ಲಿ ನಡೆದ ಮೀನುಗಾರರ ಪ್ರತಿಭಟನೆಯಲ್ಲ ಪ್ರಮೋದ್ ಅವರು ಭಾಷಣ ಮಾಡಿದ್ದರು. ಈ ವೇಳೆ ಅವರು ‘ನಮ್ಮ ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೀವಿ? ಪೋಲಿಸರು ಬರುವುದಕ್ಕೆ 5-6 ಗಂಟೆ ತಡವಾದರೆ ನಾವು ಏನು ಮಾಡುತ್ತೇವೆ? ಏನು ಅವರಿಗೆ ಮಚ್ಚು, ಖಡ್ಗದಲ್ಲಿ ಹೊಡೆದಿದ್ದಾ? 2 ಕೆನ್ನೆಗೆ ಬಾರಿಸಿದ್ದು.. ಯಾರಿಗೆ? ಕಳ್ಳಿ ಅಂತ ಆರೋಪಿತ ವ್ಯಕ್ತಿಗೆ, ಎಂದು ತಿಳಿಸಿದ್ದರು. ಸದ್ಯ ಈ ಹಿನ್ನೆಲೆಯಲ್ಲಿ ಪ್ರಮೋದ್ ವಿರುದ್ಧ ಕೇಸ್ ದಾಖಲಾಗಿದೆ.