ಬ್ರಹ್ಮಾವರ, ಏ.16 (DaijiworldNews/AA): ಆಟೋ ರಿಕ್ಷಾಗೆ ಕಂಟೈನರ್ ಟ್ರಕ್ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ ಬಳಿಯ ಅಪಾಯಕಾರಿ ತಿರುವಿನಲ್ಲಿ ಏಪ್ರಿಲ್ 16 ರಂದು ನಡೆದಿದೆ.

ಎಸ್ಎಂಎಸ್ ಕಾಲೇಜಿನ ಕಡೆಯಿಂದ ಬರುತ್ತಿದ್ದ ಮತ್ತು ಯು-ಟರ್ನ್ ತೆಗೆದುಕೊಳ್ಳಲು ರಸ್ತೆ ವಿಭಜಕದಲ್ಲಿ ಕಾಯುತ್ತಿದ್ದ ಆಟೋ ರಿಕ್ಷಾವನ್ನು ಕುಂದಾಪುರದಿಂದ ಬರುತ್ತಿದ್ದ ಕಂಟೈನರ್ ಟ್ರಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.
ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಈ ಜಂಕ್ಷನ್ ಅಪಾಯಕಾರಿ ವಲಯವೆಂದು ಗುರುತಿಸಲ್ಪಟ್ಟಿದ್ದು, ರಸ್ತೆ ಸುರಕ್ಷತೆ ಮತ್ತು ಅಪಘಾತಗಳನ್ನು ತಡೆಗಟ್ಟಲು ತುರ್ತು ಕ್ರಮಗಳ ಅಗತ್ಯವಿದೆ. ಇನ್ನು ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ, ಮತ್ತಷ್ಟು ಅವಘಡಗಳನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.