ಕಾಸರಗೋಡು,ಏ.18(DaijiworldNews/AK): ಸೇತುವೆ ಮೇಲಿಂದ ನದಿಗೆ ಹಾರಿದ ವ್ಯಕ್ತಿ ಯೋರ್ವನ ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಚೆಂಗಳದ ಶರೀಫ್ (45) ಮೃತಪಟ್ಟವರು.ಗುರುವಾರ ಸಂಜೆ ಬೈಕ್ ನಲ್ಲಿ ಬಂದ ಶರೀಫ್ ಚಂದ್ರಗಿರಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದು, ಪ್ರತ್ಯಕ್ಷ ದರ್ಶಿ ಯೋರ್ವ ನೀಡಿದ ಮಾಹಿತಿಯಂತೆ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನಾಗರಿಕರು ಶೋಧ ನಡೆಸಿದ್ದರು.
ರಾತ್ರಿ ಯಾದರೂ ಮೃತದೇಹ ಪತ್ತೆ ಹಚ್ಚಲು ಸಾಧ್ಯ ವಾಗಲಿಲ್ಲ. ಶುಕ್ರವಾರ ಬೆಳಿಗ್ಗೆ ಮತ್ತೆ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು
ಪ್ರಕರಣ ದಾಖಲಿಸಿ ಕೊಂಡಿದ್ದಾರೆ