ಬಂಟ್ವಾಳ, ಮೇ. 01 (DaijiworldNews/AA): ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಉಂಟಾಗಿ ಹಿಂಬದಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಕುದ್ದುಪದವು - ಪೆರುವಾಯಿ ರಸ್ತೆಯ ಆದಾಳ ಸಮೀಪ ಗುರುವಾರ ಸಂಭವಿಸಿದೆ.



ಪೆರುವಾಯಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕುದ್ದುಪದವಿನಿಂದ ಆಗಮಿಸಿದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ದ್ವಿಚಕ್ರ ವಾಹನದ ಬಲ ಭಾಗಕ್ಕೆ ಸಂಪೂರ್ಣ ಹಾನಿಯುಂಟಾಗಿದೆ. ಜೊತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ.
ಕಾರಿನ ಎರಡೂ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಈ ಅವಘಡದಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.