ಮಂಗಳೂರು, ಮೇ. 01 (DaijiworldNews/AA): ನಗರದ ಹೊರವಲಯದ ಕುಡುಪು ಬಳಿ ನಡೆದ ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಅನಿಲ್ ಎಂಬಾತನನ್ನು ಗೋಕಾಕದಿಂದ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡವರಿಗಾಗಿ ಪೊಲೀಸರ ತಂಡ ಹುಡುಕಾಟ ನಡೆಸುತ್ತಿದೆ. ಆ ದಿನ ಸ್ಥಳದಲ್ಲಿದ್ದ ಸುಮಾರು 15 ಮಂದಿಗೆ ನೋಟಿಸ್ ನೀಡಿ ವಿಚಾರಣೆಗೆ ಬರಲು ತಿಳಿಸಲಾಗಿತ್ತು. ಈಗಾಗಲೇ ಕೆಲವರ ವಿಚಾರಣೆ ನಡೆಸಲಾಗುತ್ತಿದೆ.
ಕುಡುಪು ವ್ಯಾಪ್ತಿಯಲ್ಲಿರುವ ಸಿಸಿ ಕೆಮರಾ ಪರಿಶೀಲಿಸಲಾಗುತ್ತಿದ್ದು, ಪ್ರತ್ಯಕ್ಷದರ್ಶಿಗಳ ಸಹಕಾರವನ್ನೂ ಪಡೆಯಲಾಗುತ್ತದೆ. ಘಟನೆ ನಡೆಯಲು ನಿರ್ದಿಷ್ಟವಾಗಿ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಘೋಷಣೆ ಬಗ್ಗೆ ದೃಢ ಪಡಿಸುವ ನಿರ್ದಿಷ್ಟವಾಗಿ ಸಾಕ್ಷಿಗಳು ಇನ್ನೂ ಸಿಕ್ಕಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.