ವಿಟ್ಲ, ಮೇ.02(DaijiworldNews/TA): ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ, ಬಂದ್ ಗೆ ವಿಟ್ಲದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಕೇರಳ ರಾಜ್ಯದ ಮತ್ತು ಕರ್ನಾಟಕದ ಕೆಎಸ್ ಆರ್ ಟಿ ಸಿ ಬಸ್ ಗಳ ಸಂಚಾರ ಮಾಡಿತ್ತು. ಆದರೆ ಬಂದ್ ಘೋಷಣೆಯಾಗುತ್ತಿದ್ದಂತೆ ಸಂಚಾರ ಸ್ಥಗಿತಗೊಳಿಸಲಾಯಿತು.

ಇನ್ನು ಖಾಸಗಿ ಬಸ್ ಗಳು ಬೆಳಗ್ಗೆನಿಂದಲೇ ರಸ್ತೆಗೆ ಇಳಿಯಲಿಲ್ಲ. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್, ಹಾಲಿನ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಗ್ಗಟ್ಟು ಬಂದ್ ಆಗಿದೆ. ವಿಟ್ಲ ಪೊಲೀಸರು ಅಲ್ಲಲ್ಲಿ ನಾಕಾಬಂಧಿ ಅಳವಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.