ಮಂಗಳೂರು, ಮೇ.02(DaijiworldNews/TA): ತೊಕ್ಕೊಟ್ಟುವಿನ ಬಾರ್ ಬಳಿ ಮುಂಜಾನೆ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಬಲಿಯಾದ ವ್ಯಕ್ತಿಯನ್ನು ಅಲೆಕಲ ನಿವಾಸಿ ಫೈಜಲ್ ಎಂದು ಗುರುತಿಸಲಾಗಿದೆ.

ತೊಕ್ಕೊಟ್ಟು ಸಮೀಪದ ಕಲ್ಲಾಪಿನ ಮಾರ್ಕೆಟ್ ಗೆ ಹೋಗಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ಯುವಕ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಯುವಕ ಓಡಿ ಪರಾರಿಯಾಗಿದ್ದು, ಬಳಿಕ ಸ್ಥಳೀಯರು ಆತನನ್ನು ನಗರದ ಆಸ್ಪತ್ರೆಗೆ ರವಾನಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.