ಪುತ್ತೂರು, ಮೇ. 10 (DaijiworldNews/AA): ಯುವಕನೊಬ್ಬ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನೆಲ್ಯಾಡಿಯಲ್ಲಿ ಸಂಭವಿಸಿದೆ.

ಶರತ್ (34) ಮೃತ ಯುವಕ.
ಕೂಲಿ ಕೆಲಸ ಮಾಡಿಕೊಂಡಿದ್ದ ಶರತ್ ಆತ ಶುಕ್ರವಾರ ರಾತ್ರಿ ತನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದನು. ಅಲ್ಲಿ ಮನೆಮಂದಿಯೊಂದಿಗೆ ಜಗಳವಾಗಿದೆ. ಬಳಿಕ ಮನೆಯ ಅಂಗಳದಲ್ಲಿ ಶರತ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನ ತಲೆಯಲ್ಲಿ ಗಾಯದ ಗುರುತುಗಳಾಗಿದೆ ಎನ್ನಲಾಗಿದೆ.
ಕೌಟುಂಬಿಕ ಕಲಹ ಈ ಘಟನೆಗೆ ಕಾರಣ ಎನ್ನಲಾಗಿದ್ದು, ಪೊಲೀಸರ ತನಿಖೆಯ ಬಳಿಕ ನಿಜಾಂಶ ಬೆಳಕಿಗೆ ಬರಬೇಕಿದೆ. ಹೆಚ್ಚಿನ ತನಿಖೆಗಾಗಿ ಮೃತದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಪ್ರಕರಣದ ಕುರಿತು ನಿಖರ ಮಾಹಿತಿ ತಿಳಿದು ಬರಬೇಕಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.