ಬಂಟ್ವಾಳ, ಮೇ. 10 (DaijiworldNews/TA): ಜಮೀನೊಂದರ ದಾರಿ ವಿವಾದದ ವಿಚಾರಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ವಿಟ್ಲ ಸಮೀಪದ ಇಡ್ಕಿದು ಎಂಬಲ್ಲಿ ನಡೆದಿದೆ.

ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ, ಸ್ಥಳೀಯ ನಿವಾಸಿಯೂ ಆಗಿರುವ ಪದ್ಮನಾಭ ಸಪಲ್ಯ, ಗೇಟಿಗೆ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಗುಪ್ತಾಂಗವನ್ನು ತೋರಿಸುವ ಮೂಲಕ ವಿಕೃತಿ ಮೆರೆದಿದ್ದಾನೆ. ಘಟನೆಯನ್ನು ಸಂತ್ರಸ್ತ ಮಹಿಳೆ ಮೊಬೈಲ್ನಲ್ಲಿ ಸೆರೆ ಹಿಡಿದ್ದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಈ ಘಟನೆ ಮೇ 3ರಂದು ನಡೆದಿದ್ದು, ಅಂದೇ ಸಂತ್ರಸ್ತ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರೂ, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.