ಕಾಸರಗೋಡು, ಮೇ.20 (DaijiworldNews/TA): ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿದ್ದು, ಮರಗಳು ಬಿದ್ದು ಸಂಚಾರ ಸ್ಥಗಿತಗೊಂಡಿದೆ.





ಕರಂದಕ್ಕಾಡ್, ಚೆರ್ಕಳದಲ್ಲಿ ಸರ್ವಿಸ್ ರಸ್ತೆ ಮೇಲೆ ಮರಗಳು ಬಿದ್ದು ಹಲವು ಸಮಯ ಸಂಚಾರಕ್ಕೆ ಅಡಚಣೆಯಾಯಿತು. ಕರಂದಕ್ಕಾಡ್ನಲ್ಲಿ ವಿದ್ಯುತ್ ತಂತಿಗಳ ಮೇಲೆ ಮರಬಿದ್ದ ಪರಿಣಾಮ ಈ ಭಾಗದಲ್ಲಿ ವಿದ್ಯುತ್ ಮೊಟಕು ಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಮರಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿ ನೀರು ತುಂಬಿರುವ ಹಾಗೂ ಹಲವೆಡೆ ರಸ್ತೆ ಕುಸಿದ ಪರಿಣಾಮ ಸಂಚಾರಕ್ಕೂ ಅಡ್ಡಿಯಾಗಿದೆ ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ಮೊಟಕು ಗೊಂಡಿದೆ. ಲಘು ವಾಹನಗಳು ಮಾತ್ರ ಈ ರಸ್ತೆಯಲ್ಲಿ ಸಂಚಾರ ನಡೆಸುತ್ತಿವೆ. ರಸ್ತೆ ಕುಸಿಯುತ್ತಿರುವುದರಿಂದ ಘನ ವಾಹನಗಳು ಸರ್ವೀಸ್ ರಸ್ತೆಗಳಲ್ಲಿ ಸಂಚರಿಸದ ಸ್ಥಿತಿ ಉಂಟಾಗಿದೆ.