ಸುಳ್ಯ, ಮೇ. 21 (DaijiworldNews/TA): ನೂತನ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಪಂಜ ಸೀಮೆಯಲ್ಲಿ ಜರುಗಿತು.

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಂಟ ಕಾಚು ಕುಜುಂಬ ದೈವದ ಮೂಲಸ್ಥಾನ ಗರಡಿ ಬೈಲು ನಲ್ಲಿ ಶ್ರೀ ಕಾಚು ಕುಜುಂಬ ದೈವದ ನೂತನ ದೈವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ಕ್ಷೇತ್ರದ ವಾಸ್ತು ಶಿಲ್ಪಿ ಪ್ರಸಾದ್ ಮುನಿಯಂಗಳ ನಿರ್ದೇಶನದಂತೆ ನಡೆಯಿತು.
ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ಭೂಮಿ ಪೂಜೆ ನೆರವೇರಿಸಿದರು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕರು ಶಿಲಾನ್ಯಾಸ ನೆರವೇರಿಸಿದರು.