ಬಂಟ್ವಾಳ, ಮೇ. 24 (DaijiworldNews/AK): ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ ಅಧೀನದಲ್ಲಿರುವ ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ವತಿಯಿಂದ ಸ್ವಿಫ್ಟ್ ಹ್ಯಾಂಡ್ಸ್-ಸೇಫ್ಗಾರ್ಡಿಂಗ್ ಲಿಟಲ್ ಲೈವ್ಸ್ ಎಂಬ ಧ್ಯೇಯದಡಿ ಪೀಡಿಯಾಕಾನ್-2025 ಪ್ರಾದೇಶಿಕ ಸಮ್ಮೇಳನ ಕಾಲೇಜಿನ ಫ್ಲೋರೆನ್ಸ್ ನೈಂಟಿಗೇಲ್ ಸಭಾಂಗಣದಲ್ಲಿ ನಡೆಯಿತು.

ಮಕ್ಕಳ ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ನರ್ಸ್ ಗಳ ಕೌಶಲ್ಯ ವೃದ್ಧಿಯ ದೃಷ್ಟಿಯಿಂದ ಆಯೋಜಿಸಿದ್ದ ಈ ಸಮ್ಮೇಳನದ ಉದ್ಘಾಟನಾ ಸಮಾರಂಭದ ಮುಖ್ಯಅತಿಥಿ ಫಾದರ್ ಮುಲ್ಲರ್ ಹೆಲ್ತ್ ಕೇರ್ ಸಿಮ್ಯುಲೇಶನ್ ಎಜ್ಯುಕೇಶನ್ನ ಮುಖ್ಯಸ್ಥ ಡಾ| ಲುಲು ಶರೀಫ್ ಮಹ್ಮೂದ್ ಅವರು, ಗರ್ಭಾಶಯದಿಂದ ನವಜಾತ ಶಿಶುವಿನವರೆಗಿನ ಸೂಕ್ಷ್ಮ ಆರೈಕೆಯ ಕುರಿತು ವಿವರಿಸಿದರು.
ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಶನ್ಸ್ ನ ನಿರ್ದೇಶಕ ರೆ|ಫಾ| ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ತುರ್ತು ಸಂದರ್ಭಗಳಲ್ಲಿ ಮಕ್ಕಳ ಆರೈಕೆ, ಆರೋಗ್ಯದ ಸಮಯೋಚಿತ ನಿರ್ವಹಣೆ ಅತಿ ಅಗತ್ಯವಾಗಿದೆ ಎಂದರು.
ಸಮಾರಂಭದಲ್ಲಿ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಶನ್ಸ್ ನ ನಿಯೋಜಿತ ನಿರ್ದೇಶಕ ರೆ|ಫಾ| ಪಾವೋಸ್ತಿನ್ ಲುಕಾಸ್ ಲೋಬೊ, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ವೈದ್ಯಕೀಯ ಅಧೀಕ್ಷಕ ಡಾ| ಕಿರಣ್ ಶೆಟ್ಟಿ, ಆಯೋಜನಾ ಸಮಿತಿ ಕಾರ್ಯದರ್ಶಿ ಜಾಯ್ಸ್ ಫೆನಾಂಡೀಸ್ ಉಪಸ್ಥಿತರಿದ್ದರು.
ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ| ಸಿ| ಜೂಡಿ ಸ್ವಾಗತಿಸಿದರು. ಆಯೋಜನಾ ಸಮಿತಿಯ ಜಾನೆಟ್ ಸಿಕ್ವೇರಾ ವಂದಿಸಿದರು. ಸಹ ಪ್ರಾಧ್ಯಾಪಕಿ ಡಾ| ಎಡ್ವಿನಾ ಫಿಲಿಪ್ ಮೊನಿಸ್ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಪ್ರಿನ್ಸಿಟಾ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಕಾಲೇಜುಗಳ ಒಟ್ಟು ೨೧೧ ಮಂದಿ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.