ಮಂಗಳೂರು, ಮೇ. 26 (DaijiworldNews/TA): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೋಟ್ಲು ಎಂಬಲ್ಲಿ ರಸ್ತೆಯ ಬದಿಯಲ್ಲಿರುವ ಬೃಹತ್ ಗಾತ್ರದ ಮರವೊಂದು ಬಾಗಿ ನಿಂತಿದ್ದು, ಅಪಾಯಕಾರಿ ಪರಿಸ್ಥಿತಿ ತಂದೊಡ್ಡಿದೆ.



ಬಾಗಿ ನಿಂತ ಮರ ರಸ್ತೆಯಲ್ಲಿ ಹೋಗುವ ವಾಹನಗಳ ಮೇಲೆ ಬೀಳುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರ ಮನವಿಯಾಗಿದೆ. ಕಳೆದ ಒಂದು ವಾರದಿಂದ ಸುರಿಯುವ ಬಾರೀ ಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು ಹಾನಿಗಳಾಗಿವೆ.