ಕಾಸರಗೋಡು, ಮೇ. 26 (DaijiworldNews/TA): ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಅಪಾರ ನಷ್ಟ ಉಂಟಾಗಿದೆ. ಹಲವೆಡೆಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯ ಗೊಂಡಿದೆ.




ಶನಿವಾರ ಸಂಜೆಯಿಂದ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹಲವೆಡೆ ವಿದ್ಯುತ್ ಕಂಬಗಳು, ತಡೆಗೋಡೆಗಳು ಧರಾಶಾಹಿಯಾಗಿದ್ದು, ಕೃಷಿ ಹಾನಿ ಜೊತೆಗೆ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಮವಾರ ರೆಡ್ ಅಲರ್ಟ್ ಘೋಷಿಸಲಾಗಿತ್ತು.
ಮುಂಜಾಗ್ರತಾ ಕ್ರಮವಾಗಿ ಸೋಮವಾರ ಶಿಕ್ಷಣ ಸಂಸ್ಥೆಗಳು , ಟ್ಯೂ ಶನ್ ಕೇಂದ್ರಗಳು, ಅಂಗನವಾಡಿ ಗಳು, ಮದ್ರಸಗಳು ಮೊದಲಾದವು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶ ನೀಡಿದ್ದರು. ಪೂರ್ವಭಾವಿ ನಿರ್ಧಾರಿತ ಪರೀಕ್ಷೆಗಳಿಗೆ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದರು.