ಬಂಟ್ವಾಳ, ಮೇ. 26 (DaijiworldNews/ AK): ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ರಾ.ಹೆ.75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಬಳಿ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮಳೆಯಿಂದ ಬ್ರೇಕ್ ಸಿಗದೆ ಚಾಲಕನ ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಿಲ್ಲ ಎಂದು ವರದಿಯಾಗಿದೆ.