ಸುಳ್ಯ, ಮೇ. 26 (DaijiworldNews/ AK): ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಭಾರಿ ಗಾಳಿ ಮಳೆಗೆ ಮನೆಗಳ ಮೇಲೆ ಮರ ಮುರಿದು ಬಿದ್ದು ಅಪಾರ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯವಿದ್ದ ನಿವಾಸಿಗಳಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಆಸ್ಪ್ರತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ, ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಹಾನಿಯಾದ ಮನೆಗಳನ್ನು ವೀಕ್ಷಿಸಿ ಸಂತ್ರಸ್ತರಿಗೆ ಸಾಂತ್ವನ ನೀಡಿದರು. ಕೂಡಲೇ ಅಧಿಕಾರಿಗಳನ್ನು ಸಂಪರ್ಕಿಸಿ ಹಾನಿಗೊಳಗಾದ ಮನೆ ಮತ್ತು ನಿವಾಸಿಗಳಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ ಹಮೀದ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಹನೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್, ಸೂಡ ಅಧ್ಯಕ್ಷ ಕೆ ಎಂ ಮುಸ್ತಫಾ, ಗ್ರಾಮ ಪಂಚಾಯತ್ ಸದಸ್ಯ ಅಬೂಸಾಲಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಕುಂಜಿ ಗೂನಡ್ಕ, ಕಾಂಗ್ರೆಸ್ ಮುಖಂಡ ಗೋಕುಲ್ ದಾಸ್ ಸುಳ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಕಾಂಗ್ರೆಸ್ ಮುಖಂಡರಾದ ಇಕ್ಫಾಲ್ ಎಲಿಮಲೆ, ಉಬೈಸ್ ಗೂನಡ್ಕ, ಜುಬೈರ್ ಅರಂತೋಡು, ತಾಜುದ್ದೀನ್ ಅರಂತೋಡು, ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸಿದ್ದಿಕ್ ಕೊಕ್ಕೊ, ಮತ್ತಿತರರು ಉಪಸ್ಥಿತರಿದ್ದರು