ಕಾಸರಗೋಡು, ಮೇ. 28 (DaijiworldNews/AA): ಜಿಲ್ಲೆಯಲ್ಲಿ ಮೇ 29 ಮತ್ತು 30 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ.

ವೃತ್ತಿಪರ ಶಿಕ್ಷಣ ಸಂಸ್ಥೆಗಳು, ಸ್ಪೆಷಲ್ ಕ್ಲಾಸ್, ಟ್ಯೂಶನ್ ಸೆಂಟರ್, ಅಂಗನವಾಡಿ, ಮದರಸ ಮೊದಲಾದವು ಗಳಿಗೆ ರಜೆ ಅನ್ವಯವಾಗಲಿದೆ. ಪೂರ್ವ ಭಾವಿ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ.
ಕ್ವಾರಿಗಳು ಕಾರ್ಯಾಚರಿಸುವಂತಿಲ್ಲ
ರೆಡ್ ಅಲರ್ಟ್ ಹಿನ್ನಲೆಯಲ್ಲಿ ಮೇ.29 ಮತ್ತು 30 ರಂದು ಜಿಲ್ಲೆಯಲ್ಲಿ ಕ್ವಾರಿಗಳು ಕಾರ್ಯಾಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಣಿಪುರ ಸೇರಿದಂತೆ ಜಿಲ್ಲೆಯ ಪ್ರವಾಸಿ ಕೇಂದ್ರಗಳು, ಬೀಚ್ ಗಳಿಗೆ ಪ್ರವೇಶ ನಿಷೇಧಿಸಲಾಗಿದೆ.