ಬಂಟ್ವಾಳ, ಮೇ. 29 (DaijiworldNews/AA): ಮೇ 27ರಂದು ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ ಪೂಜಾರಿ(21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಪೃಥ್ವಿರಾಜ್ ಜೋಗಿ(21) ಹಾಗೂ ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ(19) ಬಂಧಿತ ಆರೋಪಿಗಳು.
ಆರೋಪಿಗಳ ಶೀಘ್ರು ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಿ, 5 ಪೊಲೀಸರ ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿರುತ್ತದೆ.
ತನಿಖಾ ತಂಡವು ಗುರುವಾರ ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿರುತ್ತದೆ.