ದೇರಳಕಟ್ಟೆ, ಮೇ. 30 (DaijiworldNews/TA): ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ನೌಶಾದ್ ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ.
ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.