ಮಂಗಳೂರು, ಮೇ. 30 (DaijiworldNews/AA): ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ವರ್ಗಾಯಿಸಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಉಪ ಪೊಲೀಸ್ ಮಹಾನಿರೀಕ್ಷಕರಾಗಿ ನೇಮಿಸಲಾಗಿದೆ.
ಇದೇ ದಿನದ ಆರಂಭದಲ್ಲಿ, ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಆದೇಶದಂತೆ ಡಾ. ಅರುಣ್ ಕೆ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಗಿ ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ ಕಾರ್ಯನಿರ್ವಹಿಸಿದ್ದರು. ಆಂಧ್ರಪ್ರದೇಶದ ಗುಂಟೂರು ಮೂಲದ ಸುಧೀರ್ ಕುಮಾರ್ ರೆಡ್ಡಿ ಅವರು 2017-18ರಲ್ಲಿ ದ.ಕ.ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿರುತ್ತಾರೆ.