ಮಂಗಳೂರು, ಜೂ. 01 (DaijiworldNews/AA): ನಗರದ ಹೊರವಲಯದ ಕುಡುಪು ಬಳಿ ಏಪ್ರಿಲ್ 27 ರಂದು ಕೇರಳ ಮೂಲದ ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶನಿವಾರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ರಾಹುಲ್ ಮತ್ತು ಕೆ. ಸುಶಾಂತ್ ಅವರಿಗೆ ಜಾಮೀನು ನೀಡಲಾಗಿದೆ. ಎಫ್ಐಆರ್ ದಾಖಲಿಸುವಲ್ಲಿನ ವಿಳಂಬ ಮತ್ತು ದೂರಿನಲ್ಲಿನ ವ್ಯತ್ಯಾಸಗಳನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ.
ತನಿಖಾ ಹಂತದಲ್ಲಿ ಪೊಲೀಸರ ಕಾರ್ಯವೈಖರಿ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದವು. ಕರ್ತವ್ಯ ಲೋಪದ ಆರೋಪದ ಮೇಲೆ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.