ಮಂಗಳೂರು,ಜೂ. 01 (DaijiworldNews/AK): ನಗರದ ಬೋಂದೆಲ್ ಕೆಎಚ್ ಬಿ ಕಾಲೋನಿ ಐದನೇ ಕ್ರಾಸ್ ನಲ್ಲಿ ಹಲವು ಬೃಹತ್ ಮರವೊಂದು ವಿದ್ಯುತ್ ತಂತಿಗೆ ತಾಗಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಪ್ರತಿ ನಿತ್ಯ ಆತಂಕದಲ್ಲೇ ದಿನ ದೂಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಮಳೆಗಾಲ ಹಿನ್ನೆಲೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೇ ಬೃಹತ್ ಮರಗಳು ಉರುಳಿ ಬೀಳುತ್ತಿದ್ದು,ಹಲವು ಅವಘಡಕ್ಕೆ ಕಾರಣವಾಗಿದೆ. ಹೀಗಾಗಿ ಸಹಜವಾಗಿಯೇ ಸ್ಥಳಿಯರಲ್ಲಿ ಆತಂಕ ಉಂಟಾಗಿದೆ. ಇನ್ನು ಸ್ಥಳೀಯ ಜನಪ್ರತಿನಿಧಿ ಅಧಿಕಾರಿಗಳಿಗೆ ದೂರು ನೀಡಿದರೂ ಅವರು ಕ್ಯಾರೇ ಅನ್ನುತ್ತಿಲ್ಲ ಎನ್ನುವ ಆರೋಪ ಕೂಡ ಸ್ಥಳೀಯರಿಂದ ವ್ಯಕ್ತವಾಗಿದೆ.