ಮಂಗಳೂರು, ಜೂ.02 (DaijiworldNews/AK):ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನದೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಮೇರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹಾದು ಹೋಗುವ ರಸ್ತೆಗಳಲ್ಲಿ ಹೆಚ್ಚು ಚೆಕ್ ಪೋಸ್ಟ್ ತೆರೆದು ಜೂನ್ 01ರಂದು ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ ಆರೋಪಿಯನ್ನು ಬಂಧಿಸಲಾಗಿದೆ. ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದೆ .
ಅಲ್ಲದೇ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ. ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.