ಮಂಗಳೂರು, ಜೂ.03 (DaijiworldNews/TA): ಯುವಜನರನ್ನು ಒಗ್ಗೂಡಿಸುವುದು, ಬದಲಾವಣೆಯನ್ನು ಪ್ರಚೋದಿಸುವುದು ಭವಿಷ್ಯಕ್ಕೆ ಸ್ಪೂರ್ತಿ ನೀಡುವ ಉದ್ದೇಶದಿಂದ ಯೆನವೊಯ (ಡೀಮ್ಸ್ ಎಂದು ಪರಿಗಣಿಸಲಾದ ವಿಶ್ವವಿದ್ಯಾಲಯ) ಸಹಯೋಗದೊಂದಿಗೆ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ NSS ಕೋಶ, ಜೂನ್ 04 ರಿಂದ ಜೂನ್ 6 ರ ವರೆಗೆ ನಡೆಯುವ ಪ್ರತಿಷ್ಠಿತ ಮತ್ತು ಪರಿವರ್ತನಾಶೀಲ ಕಾರ್ಯಕ್ರಮವಾದ ಜಾಗತಿಕ ಯುವ ಶೃಂಗಸಭೆ 2025 - ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಡಾ.ನಾಗಾರಾಜ್ ರವರು ತಿಳಿಸಿದ್ದಾರೆ.

ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 4ರಂದು ನಡೆಯುವ ಉದ್ಘಾಟನಾ ಸಮಾರಂಭವನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಯೆನೆಪೊಯಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲಾ ಕುಂಞಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ರಂದೀಪ್ ಡಿ, ಐಎಎಸ್, ಯೆನೆಪೊಯಾ ವಿಶ್ವವಿದ್ಯಾಲಯ ಕುಲಪತಿ ಡಾ. ಎಂ ವಿಜಯಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್, ಐಪಿಎಸ್, ಸಹ-ಉಪಕುಲಪತಿ ಡಾ. ಶ್ರೀಪತಿ ರಾವ್ , ಕುಲಸಚಿವ ಡಾ. ಕೆ.ಎಸ್. ಗಂಗಾಧರ ಸೋಮಯಾಜಿ, ರಾಜ್ಯ ಎನ್ಎಎಸ್ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶಕ ಉಪಾಧ್ಯಾಯ ಭಾಗವಹಿಸಲಿದ್ದಾರೆ ಎಂದರು.
ಯೆನೆಪೋಯ ಪರಿಗಣಿಸಲ್ಪಟ್ಟ ವಿ.ವಿ ಎಂ.ಎಸ್ ಡಬ್ಲ್ಯು ವಿಭಾಗ ಮುಖ್ಯಸ್ಥ ಡಾ.ಮಹಮ್ಮದ್ ಗುತ್ತಿಗಾರ್ ಮಾತನಾಡಿ, ಭಾರತದ 20 ರಾಜ್ಯಗಳಿಂದ 650ಕ್ಕೂ ಹೆಚ್ಚು ಯುವ ಪ್ರತಿನಿಧಿಗಳು, 15 ದೇಶಗಳಿಂದ ಅಂತರರಾಷ್ಟ್ರೀಯ ಪ್ರತಿನಿಧಿಗಳು, 21 ಪ್ರಖ್ಯಾತ ಭಾಷಣಕಾರರು, ಯುವ ಐಕಾನ್ಗಳು, ವಲಯ ನಾಯಕರು ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.