ಬಂಟ್ವಾಳ, ಸೆ. 23 (DaijiworldNews/AA): ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರನೋರ್ವ ಪೋಲಿಸ್ ಜೀಪ್ ಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ.

ಪಿಲಾತಬೆಟ್ಟು ನಿವಾಸಿ ಹರ್ಷಿತ್ (19) ಗಾಯಗೊಂಡ ಯುವಕನಾಗಿದ್ದಾನೆ.
ಧರ್ಮಸ್ಥಳ ಪೋಲೀಸ್ ಠಾಣೆಯ ಪಿಎಸ್.ಐ.ಮಂಗಳೂರು ನ್ಯಾಯಾಲಯಕ್ಕೆ ಸಾಕ್ಷಿ ನುಡಿಯಲು ಇಲಾಖೆಯ ಪೋಲಿಸ್ ಜೀಪ್ ನಲ್ಲಿ ಹೋಗುತ್ತಿದ್ದ ವೇಳೆಗೆ ಪುಂಜಾಲಕಟ್ಟೆ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ದ್ವಿ ಚಕ್ರವಾಹನ ಸವಾರ ನಿಯಂತ್ರಣ ಕಳೆದುಕೊಂಡು ಪೋಲೀಸ್ ಜೀಪ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಾಯಗೊಂಡಿದ್ದಾನೆ. ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.