ಬಂಟ್ವಾಳ, ಅ. 08 (DaijiworldNews/TA): ಆಟೋ ರಿಕ್ಷಾ ಚಾಲಕರ ಸಂಘ (ಬಂಟ್ವಾಳ ತಾಲೂಕು ಮೋಟಾರ್ & ಜನರಲ್ ಮಜ್ದೂರ್ ಸಂಘ ದ.ಕ.) ಇದರ ಬಂಟ್ವಾಳ ಘಟಕದ 37 ನೇ ವಾರ್ಷಿಕ ಮಹಾಸಭೆ ರಿಕ್ಷಾ ಚಾಲಕ ಮಾಲಕರ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಮೋಟಾರು ಮತ್ತು ಜನರಲ್ ಮಜ್ದೂರು ಸಂಘ ಜಿಲ್ಲಾಧ್ಯಕ್ಷ ವಿಶ್ವನಾಥ ಶೆಟ್ಟಿ, ಭಾರತೀಯ ಮಜ್ದೂರು ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಸಂಘದ ಕಾನೂನು ಸಲಹೆಗಾರ ಜಯರಾಮ ರೈ, ಭಾರತೀಯ ಮಜ್ದೂರು ಸಂಘ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ, ಮೋಟಾರು ಮತ್ತು ಜನರಲ್ ಮಜ್ದೂರ್ ಸಂಘದ ಉಪಾಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.