ಬ್ರಹ್ಮಾವರ, ,ಅ. 23 (DaijiworldNews/ AK): ಚಿರತೆಯೊಂದು ಚಲಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ ನಲ್ಲಿ ಅಕ್ಟೋಬರ್ 20 ರಂದು ನಡೆದಿದೆ.

ಗಾಯಗೊಂಡ ಸವಾರನನ್ನು ನಾಂಚಾರ್ ನಿವಾಸಿ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಭಾಸ್ಕರ್ ಶೆಟ್ಟಿ ತಮ್ಮ ಬೈಕ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಚಿರತೆ ಇದ್ದಕ್ಕಿದ್ದಂತೆ ರಸ್ತೆ ದಾಟಿದಾಗ ಈ ಘಟನೆ ಸಂಭವಿಸಿದೆ. ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ, ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಪಲ್ಟಿಯಾಗಿದೆ.
ಡಿಕ್ಕಿಯ ರಭಸಕ್ಕೆ ಚಿರತೆ ಮಾರಣಾಂತಿಕವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. ಭಾಸ್ಕರ್ ಶೆಟ್ಟಿ ಗಂಭೀರ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಹೆಬ್ರಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚಿರತೆಯ ಮೃತದೇಹವನ್ನು ಪರಿಶೀಲಿಸಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.