ಸುಳ್ಯ, ಡಿ. 04 (DaijiworldNews/TA): ಬುಧವಾರ ಸಂಜೆ ಸುಳ್ಯದಲ್ಲಿ ಸುರಿದ ಭಾರಿ ಮಳೆಯ ಸಂದರ್ಭ ಉಂಟಾದ ಸಿಡಿಲ ಅಘಾತದಿಂದ ಸುಳ್ಯ ತಾಲೂಕು ಕಚೇರಿ ಬಳಿ ರಸ್ತೆ ಬದಿಯ ಮರಕ್ಕೆ ಸಿಡಿಲು ಬಡಿದು ಮರ ಹಾನಿಗೊಂಡಿದೆ.

ಈ ಸಂದರ್ಭದಲ್ಲಿ ರಸ್ತೆಯಲ್ಲಿ ಜನ ಮತ್ತು ವಾಹನ ಸಂಚಾರ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದಂತೆ ಆಗಿದೆ. ಸಿಡಿಲು ಬಡಿದ ದೃಶ್ಯಾವಳಿಯನ್ನು ಸ್ಥಳೀಯರು ಮೊಬೈಲ್ ನಲ್ಲಿ ಕ್ಲಿಕ್ಕಿಸಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವೈರಲ್ ಆಗಿದೆ.