ಕಾಸರಗೋಡು, ಡಿ. 25 (DaijiworldNews/TA): ಕಯ್ಯಾರ್ ಕ್ರಿಸ್ತರಾಜ ದೇವಾಲಯದದಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ ಜರುಗಿತು. ಕ್ರೈಸ್ತ ಬಾಂಧವರು ಕ್ರಿಸ್ ಮಸ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು.


ಕ್ರಿಸ್ತ ರಾಜ ದೇವಾಲಯದದಲ್ಲಿ ನಡೆದ ಬಲಿಪೂಜೆಯನ್ನು ರಾಂಚಿ ಸೆಮಿನರಿಯ ನಿರ್ದೇಶಕ ಫಾದರ್ ಜೋನ್ ಕ್ರಾಸ್ತ ನೆರವೇರಿಸಿದರು. ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಧರ್ಮಗುರು ಫಾದರ್ ವಿಶಾಲ್ ಮೋನಿಸ್ ಉಪಸ್ಥಿತರಿದ್ದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಕಾಸರಗೋಡು ಜಿಲ್ಲೆಯ ಎಲ್ಲಾ ಚರ್ಚ್ ಗಳಲ್ಲಿ ವಿವಿಧ ಕಾರ್ಯಕ್ರಮ ಗಳೊಂದಿಗೆ ಕ್ರಿಸ್ಮಸ್ ನ್ನು ಸಂಭ್ರಮ ದಿಂದ ಆಚರಿಸಲಾಯಿತು.