ಬೆಳ್ತಂಗಡಿ, ಫೆ. 27 (DaijiworldNews/AK): ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಬಳಿ ಮನೆ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮನೆ ಜಪ್ತಿ ಮಾಡಿದ್ದಾರೆ.

ಫೆ. ೨೬ ರಂದು ಉಪ್ಪಿನಂಗಡಿ ಪೊಲೀಸ್ ರಾಣೆಯ ಪಿಎಸ್ಐ ಸುತೇಶ್ ಕೆ ಪಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿ ಹೆಚ್ ಅಬ್ದುಲ್ ರಹಿಮಾನ್ ಎಂಬವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ಆವರಣದಿಂದ ಇಬ್ಬರು ಪರಾರಿಯಾಗಿದ್ದಾರೆ.
ಬಳಿಕ ಸ್ಥಳವನ್ನು ಪೊಲೀಸರು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು ಪತ್ತೆಯಾಗಿದ್ದು ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿದೆ.
ಮುಂದಿನ ಕಾನೂನುಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಅಟೋರಿಕ್ಷಾ, ಮೊಬೈಲ್ ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2026, ಕಲಂ: 4, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ:3(5)) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.