ಮಂಗಳೂರು, ಫೆ. 28 (DaijiworldNews/TA): ನಗರದ ಪದವಿನಂಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಮೊದಲು ಸ್ಕೂಟರ್ ಹಾಗೂ ಬೈಕ್ಗೆ ಡಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ.





ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮ ಅಂಗಡಿಗೂ ಹಾಗೂ ವಾಹನಗಳಿಗೂ ಭಾರೀ ಹಾನಿಯಾಗಿದೆ. ಸಮೀಪದ ಕಟ್ಟಡದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಅಪಘಾತದ ಸಂಪೂರ್ಣ ದೃಶ್ಯ ಸೆರೆಯಾಗಿದ್ದು, ಕಾರು ವೇಗವಾಗಿ ಬಂದು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗುವ ಕ್ಷಣಗಳು ಸ್ಪಷ್ಟವಾಗಿ ಕಾಣಿಸುತ್ತವೆ.
ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕಾರು ಚಾಲಕ ಫೋನ್ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುತ್ತಿದ್ದನೆಂಬ ಅನುಮಾನ ವ್ಯಕ್ತವಾಗಿದೆ. ಇದರಿಂದಲೇ ನಿಯಂತ್ರಣ ತಪ್ಪಿ ಸರಣಿ ಡಿಕ್ಕಿ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.