ಉಡುಪಿ, ಫೆ. 28 (DaijiworldNews/TA): ನಗರದ 80 ಬಡಗುಬೆಟ್ಟುವಿನಲ್ಲಿ ಶನಿವಾರ ಬೆಳಗ್ಗೆ ಕಂಬಳ ಕರೆಗೆ ಶಂಕುಸ್ಥಾಪನೆ ನೆರವೇರಿಸುವ ಕುರಿತಂತೆ ಉಂಟಾಗಿರುವ ಗೊಂದಲದ ಬಗ್ಗೆ ಮಾಜಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕಂಬಳದಲ್ಲಿ ಪಕ್ಷಭೇದ ಮರೆತು ಎಲ್ಲರೂ ಕೆಲಸ ಮಾಡುತ್ತಾರೆ. ಸ್ವಂತ ಹಣವನ್ನು ಖರ್ಚು ಮಾಡಿ ಕಂಬಳ ಮಾಡಲಾಗುತ್ತಿದೆ. ಅಲ್ಲದೆ ಜಿಲ್ಲಾಡಳಿತದೊಂದಿಗೆ ಚರ್ಚೆ ಮಾಡಿ ದಿನ ನಿಗದಿ ಮಾಡಲಾಗಿದೆ.
ಆದರೆ ವಿನಾಕಾರಣ ರಾಜಕಾರಣ ಬೆರೆಸಲಾಗಿದೆ. ಕಾಂಗ್ರೆಸ್ ಮತ್ತು ಮಾಜಿ ಸಚಿವರು ಈ ಕೆಲಸ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಜಿಲ್ಲಾಡಳಿತದ ಈ ನಡೆ ಸರಿ ಅಲ್ಲ ಎಂದು ಅವರು ತಿಳಿಸಿದರು.