ಕಾಸರಗೋಡು, ಮಾ. 01 (DaijiworldNews/TA): ಬಿಜೆಪಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ಕೆ.ಸುರೇಂದ್ರನ್ ಉಪ್ಪಳ ಸಮೀಪದ ಸೋಂಕಾಲ್ ಎಂಬಲ್ಲಿ ಶನಿವಾರ ಚಾಲನೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್ ಅಶ್ವಿನಿ, ಎನ್.ಡಿ . ಎ ಸಂಚಾಲಕ ವಿಜಯ್ ಕುಮಾರ್ ರೈ, ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ , ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ ,ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ,, ವಲ್ಸರಾಜ್ ಕೆ. ಪಿ ಉಪಸ್ಥಿತರಿದ್ದರು.