ಮಂಗಳೂರು/ಉಡುಪಿ, ಮಾ. 01 (DaijiworldNews/AK): ಅವಳಿ ಜಿಲ್ಲೆಗಳಲ್ಲಿ ಶನಿವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದೆ, ಮೊದಲ ದಿನ ಒಟ್ಟು 203 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ದಕ್ಷಿಣ ಕನ್ನಡದಲ್ಲಿ 165 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಕನ್ನಡ ಭಾಷಾ ಪತ್ರಿಕೆಗೆ, 21,661 ನೋಂದಾಯಿತ ವಿದ್ಯಾರ್ಥಿಗಳಲ್ಲಿ 21,498 ವಿದ್ಯಾರ್ಥಿಗಳು ಹಾಜರಾಗಿದ್ದರು ಮತ್ತು 163 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ. ಅರೇಬಿಕ್ ಭಾಷಾ ಪರೀಕ್ಷೆಗೆ, 315 ನೋಂದಾಯಿತ ಅಭ್ಯರ್ಥಿಗಳಲ್ಲಿ 313 ವಿದ್ಯಾರ್ಥಿಗಳು ಹಾಜರಾಗಿದ್ದರು, 2 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ 59 ಕೇಂದ್ರಗಳಲ್ಲಿ ಯಾವುದೇ ಗೊಂದಲ ಅಥವಾ ತಾಂತ್ರಿಕ ದೋಷಗಳಿಲ್ಲದೆ ಪರೀಕ್ಷೆಗಳು ಸುಗಮವಾಗಿ ನಡೆದಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರಾಜೇಶ್ವರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 29 ನಿಗದಿತ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಾರಂಭವಾದವು. 9,900 ನೋಂದಾಯಿತ ಅಭ್ಯರ್ಥಿಗಳಲ್ಲಿ 9,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಆದರೆ 38 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಜಿಲ್ಲೆಯಲ್ಲಿ ಶೇ. 99.62 ರಷ್ಟು ಹಾಜರಾತಿ ದಾಖಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ, ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿತ್ತು. ಮೊದಲ ದಿನ ಜಿಲ್ಲೆಯ ಯಾವುದೇ ಭಾಗದಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.