ಕುಂದಾಪುರ, ಮಾ. 01 (DaijiworldNews/AK): ಫೆಬ್ರವರಿ 28 ರಂದು ಹೊಸಂಗಡಿ ಬಳಿ ಚಾರಣಧ ಸಮಯದಲ್ಲಿ ನದಿಯಲ್ಲಿ ಮುಳುಗಿ 53 ವರ್ಷದ ಮಹಿಳೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಕುಂದಾಪುರದ ಪ್ರಸಿದ್ಧ ಮೆಡಿಕಲ್ ಶಾಪ್ನ ಮಾಲಕಿ ಶುಭಶ್ರೀ ಕಾರಂತ್ (53) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಕುಂದಾಪುರದ 8–10 ಜನರ ಗುಂಪು ಹೊಸಂಗಡಿ ಬಳಿಯ ಮೆಟ್ಕಲ್ ಬೆಟ್ಟದ ಪ್ರದೇಶದ ಕಡೆಗೆ ಚಾರಣಕ್ಕೆ ಹೋಗಿದ್ದರು ಎನ್ನಲಾಗಿದೆ.ವಿಹಾರದ ಸಮಯದಲ್ಲಿ, ಶುಭಶ್ರೀ ನದಿಗೆ ಇಳಿದು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆಕೆಯ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಅಪಘಾತದ ನಿಖರವಾದ ಕಾರಣದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.