ಉಡುಪಿ, ಏ. 26 (DaijiworldNews/AK): ಉಡುಪಿಯ ನಗರದ ಬಸ್ ನಿಲ್ದಾಣದ ಎದುರಿನ ಹಳೆಯ ಕಟ್ಟಡವೊಂದರಲ್ಲಿ ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ.


ಪ್ರಮುಖ ಸ್ಥಳದಲ್ಲಿದ್ದ ಆ ಕಟ್ಟಡದಲ್ಲಿ ಘಟನೆ ನಡೆದ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲವು ಅಂಗಡಿಗಳಿದ್ದವು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿರುವುದನ್ನು ಗಮನಿಸಿದ ಜನರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಆಗಮನದ ವಿಳಂಬದ ಬಗ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.