ಮಂಗಳೂರು,ಜು. 09(DaijiworldNews/AK): ರಾಹುಲ್ ಗಾಂಧಿಯವರ ಕುರಿತು ಏಕವಚನದಲ್ಲಿ ಮಾತನಾಡಿ ‘ ಕೆನ್ನೆಗೆ ಬಾರಿಸಬೇಕು ಎಂದು ಹೇಳಿಕೆ ನೀಡಿರುವ
ಶಾಸಕ ಡಾ| ಭರತ್ ಶೆಟ್ಟಿ ಒಬ್ಬ ನಾಲಾಯಕ್ ರಾಜಕಾರಣಿ. ಆತನಿಗೆ ತಾಕತ್ತಿದ್ದರೆ, ಗಂಡು ಮಗ ಆಗಿದ್ದರೆ ಜಿಲ್ಲೆಯ ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾ ರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮನಾನಾಥ ರೈ ಅವರು ಸವಾಲು ಹಾಕಿದ್ದಾರೆ.


ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಲೆ ಸರಿಲ್ಲ, ಹುಚ್ಚ’ ಎನ್ನುವ ಪದಗಳನ್ನೂ ಭರತ್ ಶೆಟ್ಟಿ ಬಳಸಿದ್ದು, ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ನನ್ನ ಮೇಲೂ ಬಿಜೆಪಿಯವರು ಸಾಕಷ್ಟು ಆರೋಪ ಮಾಡಿದ್ದಾರೆ. ಹುಟ್ಟನ್ನೇ ಪ್ರಶ್ನಿಸಿ ತಾಯಿಯ ಮೇಲೆ ಆರೋಪ ಮಾಡಿದ್ದಾರೆ. ಇದು ಬಿಜೆಪಿಯವರ ನಡವಳಿಕೆ ಎಂದರು.
ಆದರೆ ನಾವೇನು ಬಳೆ ತೊಟ್ಟು ಕುಳಿತುಕೊಳ್ಳುವುದಿಲ್ಲ, ಜಿಲ್ಲೆಯಲ್ಲಿ ಪಕ್ಷ ಸೋತಿರಬಹುದು, ಆದರೆ ಸತ್ತಿಲ್ಲ. ಸರಕಾರ ಅವರ ಮೇಲೆ ಸ್ವಯಂ ಪ್ರೇ ರಿತ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಐವನ್ ಡಿ’ಸೋಜಾ ಮಾತನಾಡಿ, ಶಾಸಕ ಭರತ್ ಶೆಟ್ಟಿ ಒಬ್ಬ ಚಿಲ್ಲರೆ ರಾಜಕಾರಣಿ. ಸಂಸ್ಕೃ ತಿ ಇಲ್ಲದ ರಾಜಕಾರಣಿ. ಶಾಸಕ ಸ್ಥಾ ನಕ್ಕೆ ಅಗೌರವ ತೋರಿಸಿ ಶಾಸಕರ ಮಾನ ಹರಾಜು ಮಾಡಿದ್ದಾರೆ. ಶಾಸಕನಾಗಲೂ ಅನರ್ಹನಾಗಿರುವ ವ್ಯಕ್ತಿ. ರಾಹುಲ್ ಗಾಂಧಿಯವರಿಗೆ ‘ಕೆನ್ನೆಗೆ ಬಾರಿಸಬೇಕು’ ಎಂದು ಹೇಳುವುದರ ಜತೆಗೆ ನಾಯಿಗೆ ಹೋಲಿಸಿದ್ದಾರೆ. ನಾಯಿಗೆ ಇರುವ ಬುದ್ಧಿಯೂ ಶಾಸಕ ಭರತ್ ಶೆಟ್ಟಿಗೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆರೋಪಿಸಿದರು.