ಬೆಂಗಳೂರು, ನ.24(DaijiworldNews/AK):ಮುಸ್ಲಿಂ ಸಮುದಾಯದ ಮತಗಳಿಂದ ನನ್ನ ಸೋಲಿಗೆ ಕಾರಣವೆಂದು ಆರೋಪಿಸಿದ ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇಬ್ರಾಹಿಂ, ಅಹಿಂದ ದಲಿತ ಮತ ಇಲ್ವಾ ? ನಿಮ್ಮ ದೌರ್ಬಲ್ಯ ಮುಚ್ಚಿಕೊಳ್ಳೊಕೆ ಯಾಕೆ ಮುಸ್ಲಿಮರ ಮೇಲೆ ಅಪಾದನೆ ಮಾಡುತ್ತೀರಾ. ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ ನಿಮ್ಮಜ್ಜನಿಗೆ ಅಲ್ಪಸಂಖ್ಯಾತರು ಮತ ಕೊಟ್ಟಿದ್ದಕ್ಕೆ ಸಿಎಂ ಆಗಿದ್ದು. ಪ್ರಧಾನಿಯಾಗಿದ್ದಾಗಲು ಅಲ್ಪಸಂಖ್ಯಾತರ ಕೊಡುಗೆ ಇದೆ. ಅಷ್ಟೇ ಅಲ್ಲ ನಿಮ್ಮಪ್ಪ(ಕುಮಾರಸ್ವಾಮಿ) ಸಾಬ್ರ ಮತಗಳಿಂದಲೇ ಗೆದ್ದಿದ್ದು ಎಂದು ಟಾಂಗ್ ಕೊಟ್ಟಿದ್ದಾರೆ
ನನ್ನನ್ನು ಅಧ್ಯಕ್ಷ ಸ್ಥಾನದಿಂದ ತೆಗೆದಾಗಲೇ ನಾನು ಹೇಳಿದ್ದೆ, ಚನ್ನಪಟ್ಟಣ ಚುನಾವಣೆನ ನನ್ನ ಬಿಟ್ಟು ನಡೆಸಿ ಎಂದಿದ್ದೆ. ನಾನಿದ್ದಾಗ ಕುಮಾರಸ್ವಾಮಿ 25 ಸಾವಿರ ಮತಗಳಿಂದ ಗೆಲ್ಲಿಸಿದ್ರು, ಈಗ ನಿಖಿಲ್ ಕುಮಾರಸ್ವಾಮಿಯನ್ನು 20 ಸಾವಿರ ಮತಗಳಿಂದ ಸೋಲಿಸಿದ್ದಾರೆ ಎಂದರು.
ಸುದ್ದಿಗೋಷ್ಠಿ ನೋಡಿ ಅಯ್ಯೋ ಅನಿಸಿತು, ಚಿಕ್ಕವಯಸ್ಸಿಗೆ ಹೀಗೆ ಆಗಬಾರದಿತ್ತು ಎಂದು ನಿಖಿಲ್ಗೆ ತಿರುಗೇಟು ನೀಡಿದರು.ನಿಮ್ಮಜ್ಜ, ನಿಮ್ಮಪ್ಪನ ಅಮಿತ್ ಶಾ ಹತ್ತಿರ ಕರೆದುಕೊಂಡು ಹೋಗಿದ್ದು ನೀನೆ ಅಲ್ವೇನಪ್ಪಾ? ನಾನು ಅಧ್ಯಕ್ಷ ಇದ್ದಾಗ ನನಗೆ ಹೇಳದೇ ಹೋದ್ರಿ. ಈಗಲೂ ನಾನೇ ಅಧ್ಯಕ್ಷ ಇದ್ದೀನಿ. ಯೋಗೇಶ್ವರ್ ಲೊಕಲ್ ಅಭ್ಯರ್ಥಿ. ಆತನು ಒಕ್ಕಲಿಗ ಜನಾಂಗದವರಾಗಿದ್ದಾರೆ. ನಿನಗೆ ಇರೋ ಬಂಡವಾಳ ನಿಮ್ಮಜ್ಜ. ನಿಮ್ಮಜ್ಜನವರಿಗೆ ಇದ್ದಿದ್ದು ಸಿದ್ದಾಂತ ಅದನ್ನ ಬಲಿಕೊಡಿಸಿದ್ರಿ ಎಂದು ಕಿಡಿಕಾರಿದರು.