ಬೆಂಗಳೂರು,ಮಾ.05 (DaijiworldNews/AK):ಸರಕಾರದಲ್ಲಿ ದುಡ್ಡಿಲ್ಲ; ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ಧಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ. ನಾನು ಸಿದ್ದಣ್ಣ, ಲೂಟಿ ಗ್ಯಾರಂಟಿ ಅಣ್ಣ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್ ಎಂದು ಆಕ್ಷೇಪಿಸಿದರು. ಎಲ್ಲ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಈ ಮನೆಹಾಳ ಕಾಂಗ್ರೆಸ್ ಸರಕಾರ ನೀಡಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ: ಛಲವಾದಿ ನಾರಾಯಣಸ್ವಾಮಿ
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ದಲಿತರ ಹಣ ದುರ್ಬಳಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಂದೋಲನ ರೂಪಿಸಿದೆ. ಬಿಜೆಪಿಯ ದಲಿತಪರ ಚಿಂತನೆ, ಅವರ ಪರವಾದ ಯೋಜನೆಗಳೇ ಕಾರಣ ಎಂದು ತಿಳಿಸಿದರು.
ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಈ ವಿಷಯವನ್ನು ತೀಕ್ಷ್ಣವಾಗಿ ಪರಿಗಣಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.
ಕೌನ್ಸಿಲರ್ ಚುನಾವಣೆ ಹತ್ತಿರದಲ್ಲಿರುವಂತೆ ಕಾಣುತ್ತಿದೆ. ಕೋರ್ಟಿನ ಆದೇಶದ ಕಾರಣ ಚುನಾವಣೆ ನಡೆಯುವ ಸಾಧ್ಯತೆ ಇದೆ. ನಾವು ಜನರನ್ನು ಭೇಟಿ ಮಾಡಿ ಮನೆಮನೆಗೆ ಹೋಗಿ ಅವರನ್ನು ಪ್ರೇರೇಪಿಸಬೇಕು. ಬಿಜೆಪಿ ಕಾರ್ಯಕರ್ತರನ್ನು ನಾವು ಉತ್ತೇಜಿಸಬೇಕು ಎಂದು ಮನವಿ ಮಾಡಿದರು. ಈ ಹೋರಾಟಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶಾಸಕರಾದ ಎಸ್.ಆರ್.ವಿಶ್ವನಾಥ್, ಬೈರತಿ ಬಸವರಾಜ್, ಮಾನಪ್ಪ ವಜ್ಜಲ್, ಉದಯ್ ಗರುಡಾಚಾರ್, ರಘು, ಸಿಮೆಂಟ್ ಮಂಜು, ಭಾಗೀರಥಿ ಮರುಳಸಿದ್ದಯ್ಯ, ಮಾಜಿ ಶಾಸಕ ಹಾಲಪ್ಪ, ಪ್ರಕೋಷ್ಠಗಳ ಸಂಯೋಜಕ ದತ್ತಾತ್ರಿ, ಮುಖಂಡರಾದ ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಉಮೇಶ್ ಶೆಟ್ಟಿ, ರವೀಂದ್ರ, ನಗರದ 3 ಜಿಲ್ಲೆಗಳ ಅಧ್ಯಕ್ಷರಾದ ಹರೀಶ್, ರಾಮಮೂರ್ತಿ, ಸಪ್ತಗಿರಿ ಗೌಡ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.