ಬೆಂಗಳೂರು, ಮಾ.12 (DaijiworldNews/AA): ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆ ವಸತಿ ಯೋಜನೆಯಡಿ ಕೊಟ್ಟಿಲ್ಲ. ಒಂದು ವೇಳೆ ಬಿಜೆಪಿ ಅವರು ವಸತಿ ಹಂಚಿಕೆ ಮಾಡಿರುವ ದಾಖಲಾತಿ ಕೊಟ್ಟರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಬಿಜೆಪಿ ಸದಸ್ಯರಿಗೆ ಸವಾಲೆಸಗಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ನವೀನ್, ವಸತಿ ಯೋಜನೆ ಬಗ್ಗೆ ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ವಸತಿ ಯೋಜನೆ ಅಡಿ ಮನೆ ಸರಿಯಾಗಿ ನಿರ್ಮಾಣ ಮಾಡುತ್ತಿಲ್ಲ ಎಂದು ಆರೋಪ ಮಾಡಿದರು. ಸಚಿವರು ಸದನಕ್ಕೆ ತೃಪ್ತಿಪಡಿಸಲು ಮಾತ್ರ ಉತ್ತರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದರಲ್ಲಿ ರಾಜಕೀಯ ಮಾಡಬೇಡಿ. ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿಲ್ಲ. ಮನೆ ಕೊಟ್ಟಿರೋದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದರು.