ಬೆಂಗಳೂರು,ಮಾ.21(DaijiworldNews/AK): ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶ ಹೊರಡಿಸಿದ್ದಾರೆ.

ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ 18 ಸದಸ್ಯರನ್ನು ಸ್ಪೀಕರ್ ಯುಟಿ ಖಾದರ್ ಅಮಾನತುಗೊಳಿಸಿದ್ದಾರೆ.
ವಿಧಾನಸಭೆ ನಡಾವಳಿಯ 348ನೇ ನಿಯಮದಡಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು, ಎಂ.ಆರ್ ಪಟೇಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯನ್, ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿಕೆ ರಾಮಮೂರ್ತಿ, ಯಶ್ಪಾಲ್ ಸುವರ್ಣ, ಹರಿಶ್ ಬಿ.ಪಿ, ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಧೀರಜ್ ಮುನಿರಾಜು, ಮುನಿರತ್ನ, ಚಂದ್ರು ಲಮಾಣಿ ಅವರನ್ನ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದರು. ಸ್ಪೀಕರ್ ರೂಲಿಂಗ್ಗೆ ವಿಪಕ್ಷ ಸದಸ್ಯರು ತೀವ್ರ ಖಂಡನೆ ವ್ಯಕ್ತಪಡಿಸಿದರು.