ಬೆಂಗಳೂರು, ಮಾ.29(DaijiworldNews/TA): ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಮತ್ತು ಅವಶೇಷಗಳ ಕಾಯ್ದೆ, 1958 ರ ಅಡಿಯಲ್ಲಿ "ರಾಷ್ಟ್ರೀಯ ಮಹತ್ವದ ಸ್ಮಾರಕ" ಎಂದು ಘೋಷಿಸುವಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನಲ್ಲಿರುವ ಸಮಾಧಿಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸಿದ ಅವರು, ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಪ್ರತಿರೋಧವನ್ನು ಮುನ್ನಡೆಸಿದ ಮೊದಲ ಮಹಿಳೆಯರಲ್ಲಿ ಒಬ್ಬರಾಗಿ ರಾಣಿ ಚೆನ್ನಮ್ಮ ಭಾರತದ ಇತಿಹಾಸದಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದ್ದಾರೆ ಎಂದು ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯವು ದೇಶಾದ್ಯಂತ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಅವರು ಹೇಳಿದರು.
ಸ್ಮಾರಕಕ್ಕೆ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯವಿದೆ. ದೇಶಾದ್ಯಂತ ಮತ್ತು ಹೊರಗಿನ ಪ್ರವಾಸಿಗರನ್ನು ಈ ಸ್ಥಳ ಸೆಳೆಯುತ್ತದೆ. ಈ ಮೂಲಕ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಜೊತೆಗೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.